ಕವನದ ಶೀರ್ಷಿಕೆ
*ಚಳಿಗಾಲದ ಚಳಿ ಚಳಿ....*
ಚಳಿಗಾಲವು ಬಂದೈತೆ ತಂಗಾಳಿಯು ಬೀಸೈತೆ
ಹುಡುಕುವೆವು ಬೆಚ್ಚನೆಯ ಉಡುಪುಗಳ ||ಪ||
ಮನೆಯೊಳಗಿನ ಮಕ್ಕಳು ಉಡುಪುಗಳ ತೊಟ್ಟು
ಅಂದು ಚಂದದಿ ಕಾಣುವರು ಗೊಂಬೆಯ್ಹಾಂಗೆ
ಸಂಭ್ರಮದಿ ನಲಿಯುವರು ತಾವೆಲ್ಲ ಮೈಮರೆತು
ಅಮ್ಮ ಕರೆದಾಗ ಆಟ ಬಿಟ್ಟು ಓಡೋಡಿ ಬರುವರು ||೧||
ಹಿರಿಯರು ಕಿರಿಯರು ಎಲ್ಲಾರು ಸೇರಿ ಒಟ್ಟಾಗಿ
ಕೂಡುವರು ಚಳೆಗಂಜಿ ಬೆಚ್ಚನೆಯ ಬಟ್ಟೆಗಳುಟ್ಟು
ಬೆಳಗಾಗಿ ಬಾನಿನಲಿ ಸೂರ್ಯನು ಮೂಡಲು
ತಂಡಿಯು ಬಿಡದು ನಗುನಗುತಾ ಹೊರಗೆ ಬಾರಣ್ಣ ||೨||
ಗಡಗಡ ನಡುಗುವ ಚಳಿಗಂಜಿ ನಾವು ಹಾಸಿಗೆಯ
ಜಗ್ಗಿ ಜಗ್ಗಿ ಎಳೆದು ಹೊದ್ದುಕೊಂಡು ಮಲಗುವೆವು
ಚಳಿ ಚಳಿಯು ಬಿಟ್ಟಾಗ ಬೆಚ್ಚನೆಯ ಮನೆಯಿರಲು
ಬಿಸಿ ಬಿಸಿಯ ಚಹಾ ಸಿಗಲು ಆನಂದವೋ ಆನಂದ ||೩||
ಸಂಜೆಯ ಹೊತ್ತಿಗೆ ಸರಿಯಾಗಿ ಮನೆಸೇರೊ ನೀನು
ಅನುದಿನವು ಉಂಡಾಗ ಬೇಗ ಬಿಸಿಯೂಟ ಸಿಕ್ಕರೆ
ಸವಿರುಚಿಯು ಹೆಚ್ಚುವುದು ದೇಹಕ್ಕೂ ಒಳಿತಾಗಿ
ಮೈಮನವು ಉಲ್ಲಾಸದಿ ಒಳಗೊಳಗೆ ಪುಳಕಿತವು ||೪||
ರಚನೆ
ಯಗುಮಾಶ
*ಶ್ರೀ ಶರಣಬಸ್ಸಪ್ಪ ಎಂ ಗುಳೇದ*
*ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ( ರಿ) ಮಡಿಕೇರಿ*
ಕೊಡಗು ಜಿಲ್ಲೆಯ ಕವಿ ಮನಸ್ಸುಗಳಿಗಾಗಿ ವಾಟ್ಸ್ ಅಪ್ ಮೂಲಕ ಬಳಗದಿಂದ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಕವನದ ವಿಷಯ: *ಚಳಿಗಾಲದ ಅನುಭವ*
ಪ್ರಥಮ,ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಕವನಗಳಿಗೆ ನಗದುಬಹುಮಾನ ಹಾಗೂ ಪ್ರಶಂಸಾಪತ್ರವನ್ನು ನೀಡಲಾಗುವುದು.
ಹಾಗೆಯೇ,ಮೆಚ್ಚಿಗೆಯ ಹತ್ತು ಕವನಗಳಿಗೂ ನಗದು ಬಹುಮಾನ ಹಾಗೂ ಪ್ರಶಂಸಾಪತ್ರವನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಕವಿ ಮನಸ್ಸುಗಳಿಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಪಾಲ್ಗೊಂಡ ಕವನಗಳಲ್ಲಿ ಆಯ್ದ ಕವನಗಳನ್ನು ಪುಸ್ತಕರೂಪದಲ್ಲಿ ಪ್ರಕಟಿಸಲಾಗುವುದು ಹಾಗೂ ಪುಸ್ತಕದ ಪ್ರತಿಯನ್ನು ಕವನ ರಚಿಸಿದ ಕವಿಗಳಿಗೆ ಉಚಿತವಾಗಿ ನೀಡಲಾಗುವುದು.
ನಿಯಮಗಳು:-
೧)ಕವನದ ವಿಷಯವು ಚಳಿಗಾಲದ ಅನುಭವವಾಗಿರಬೇಕು.
೨)ಕವನಗಳು ಹದಿನಾರರಿಂದ ಇಪ್ಪತ್ತನಾಲ್ಕು ಸಾಲುಗಳ ಮಿತಿಯಲ್ಲಿ ಇರಬೇಕು.
೩) ಕವನವು ಕನ್ನಡ ಭಾಷೆಯಲ್ಲಿರಬೇಕು.
೪)ಕವನವು ರಾಜಕೀಯ ಹಾಗೂ ಧಾರ್ಮಿಕ ಸಂಘರ್ಷಗಳಿಗೆ ಕಾರಣವಾಗಬಾರದು.
೫) ಕವನಗಳು ಈಗಾಗಲೇ ಪ್ರಕಟವಾಗಿರಬಾರದು,ಸ್ವಂತ ರಚನೆಯಾಗಿರಬೇಕು.
೬) ಕವನಗಳನ್ನು ಮೊದಲೇ ಸಿದ್ಧಪಡಿಸಿಕೊಂಡು,ಇದೇ ಡಿಸೆಂಬರ್ ಹತ್ತೊಂಬತ್ತು ಶನಿವಾರ ( 19-12-2020) ಸಂಜೆ ಆರರಿಂದ ಹತ್ತು ಗಂಟೆಯೊಳಗೆ ಕಳುಹಿಸಬೇಕು.
೭) ಕವನಗಳನ್ನು ಮೊಬೈಲ್ ನಲ್ಲಿ ಟೈಪ್ ಮಾಡಿ ವಾಟ್ಸ್ ಅಪ್ ನಲ್ಲಿ ಕಳುಹಿಸಬೇಕು.ಫೊಟೋ,ಕೈಬರೆಹಗಳನ್ನು ಸ್ವೀಕರಿಸುವುದಿಲ್ಲ.
೮) ಕವನಗಳನ್ನು 94483 46276 ಗೆ ವಾಟ್ಸ್ ಅಪ್ ಮೂಲಕ ಕಳುಹಿಸಬೇಕು.
-ಎಂ.ಪಿ.ಕೇಶವ ಕಾಮತ್, ಅಧ್ಯಕ್ಷ,ಕೊಡಗು ಲೇಖಕರ ಹಾಗೂ ಕಲಾವಿದರ ಬಳಗ,ಮಡಿಕೇರಿ
**************************
No comments:
Post a Comment