ಸ್ಪರ್ಧೆಗೆ,
ಕವನದ ಶೀರ್ಷಿಕೆ : “ವಿಶ್ವಪ್ರೇಮ”
ಜಗದಲಿ ಮೂಡುತಿದೆ ಅಭದ್ರತೆಯನು
ಮನೆಯಿಂದ ಹೊರನಡೆದರೆ ಮರಳುವೆನೊ
ಎಂಬ ಭಯದಿ ಹೆಣ್ಣುಮಗಳು ಕಾತರಿಸುವಳು
ಹೆಚ್ಚುತ್ತಿದೆ ದ್ವೇಷ ಅಸೂಯಯ ಜ್ವಾಲೆಯನು
ಜಾತಿಯತೆಯು ತಿಳಿದ ಜಾಣರಿಂದಲೆ ಹೆಚ್ಚುತಿದೆ
ಕೋಮು-ಗಲಭೆಗಳ ಮೂಲ ಬೆಳೆಯುತಿದೆ
ನಮ್ಮ ದೇಶದ ಅಧಿಕಾರಶಾಹಿ ಮೂಲದಿ
ದಬ್ಬಾಳಿಕೆ ಮಿತಿಮೀರುತಿದೆ ಧನಿಕರಿಂದ
ಸತ್ಯ ಸಂಧತೆಗೆ ಬೆಲೆಯಿಲ್ಲದಾಗಿದೆ
ಕಳ್ಳಕಾಕರ,ಮೋಸ-ವಂಚಕರ ಮದ
ಅತ್ಯಾಚಾರಿಗಳ ಹುಟ್ಟಡಗಿಸಬೇಕಾಗಿದೆ
ದೇಶದ ಶಾಂತಿಗೆ ಭಂಗತರುವವರ ಹರಣವಾಗಬೇಕಾಗಿದೆ
ರಾಷ್ಟ್ರದ ರಕ್ಷಣೆಗೆ ಪಣತೊಡುವಂತಾಗಲು
ಏಕತೆ-ಐಕ್ಯತೆ ಸಾಮರಸ್ಯದಿ ಬದುಕಲು
ಸತ್ಯ,ಮಾನ ಪ್ರಾಣ ಜ್ಯಾತ್ಯಾತೀತತೆ ಮೂಡಲು
ಅನುರಾಗ ಅರಳಿ ಭ್ರಾತೃತ್ವ ಬೆಳಗಲು
ನಿಷ್ಕಲ್ಮಷವಾದ ವಿಶ್ವಪ್ರೇಮ ಎಲ್ಲರಲಿ ಅರಳಲಿ.
ಇಂತಿ,
ಶರಣಬಸಪ್ಪ ಎಂ ಗುಳೇದ
No comments:
Post a Comment