Tuesday, December 22, 2020

ಕಣ್ಣೀರಿನ ಕಥೆ ಚುಟುಕುಗಳು ೨೨/೧೨/೨೦೨೦

 ಚುಟುಕುಗಳ ಶೀರ್ಷಿಕೆ

*ಕಣ್ಣೀರಿನ ಕಥೆ*


                   ೧

ಹೆಸರಿಗೆ ಮಾತ್ರ ರೈತ ಬೆನ್ನೆಲುಬು

ಎನ್ನುವವರು ಸಾಲದ ಸುಳಿಗೆ ಸಿಕ್ಕಿ

ತಾನು ಬೆಳೆದ ಬೆಳೆಗೆ ಸರಿಯಾದ

ಬೆಂಬಲ ಬೆಲೆ ಸಿಗದೆ ಕಂಗಾಲಾಗಿ

ಅಸಹಾಯಕತೆಯ ಕಣ್ಣೀರು ಹಾಕಿ

ಆತ್ಮಹತ್ಯೆಗೆ ಶರಣಾಗಿರುವನು.


                 ೨

ದೇಶ ಕಾಯೋ ಸೈನಿಕ ಅನ್ನ ನೀಡೋ ರೈತ

ವಿದ್ಯ ಕೊಡುವ ಶಿಕ್ಷಕ ಮತ್ತು ಸಾರಿಗೆ ನೌಕರರು

ವೈದ್ಯಕೀಯ ಸಿಬ್ಬಂದಿ ವರ್ಗ ಹಾಗೂ ಅಗತ್ಯ 

ಸೇವೆಗಳ ನೀಡುವ ಶ್ರೀ ಸಾಮಾನ್ಯರು ಹಗಲಿರುಳು ಅವರ ಕಣ್ಣೀರಿನ ಕಥೆ ಬದಿಗಿಟ್ಟು ದಣಿವರಿಯದೆ ದುಡಿಯುವ ಯೋಧರು ಅವರಿಗೆ ಎಂದೆಂದಿಗೂ 

ನಾವು ಚಿರಋಣಿಯಾಗಿರೋಣ.


ರಚನೆ

ಯಗುಮಾಶ

*ಶ್ರೀ ಶರಣಬಸ್ಸಪ್ಪ ಎಂ ಗುಳೇದ*


No comments:

Post a Comment

Videos