ಆಧುನಿಕ ವಚನಗಳು
ವಿಷಯ : ಪ್ರಸಾದ
೧
ದೇಗುಲದಲ್ಲಿ ತಿಂದುಂಬರೆ ಪ್ರಸಾದ ಎನ್ನುವರಯ್ಯ
ಮನೆಯಲ್ಲಿ ಕುಳಿತುಂಡರೆ ಊಟ ಎಂಬುವರಯ್ಯ
ಅದೇ ಪ್ರೀತಿ ಇಲ್ಲದವರಿಗೆ ಬಡಿಸಲು ಕೂಳೆನ್ನುವರ
ನಾನಾ ರೀತಿ ಹೊಟ್ಟೆ ತುಂಬಿಸುವದು ಗೂಳಿ ಬಸವ
೨
ಭಕ್ತಿ ಇತ್ತು ಪ್ರಸಾದವ ಸೇವಿಸಯ್ಯ ಅದು ಶಕ್ತಿ
ಉಲ್ಲಾಸವ ನೀಡುವುದಯ್ಯ ಅನ್ನದ ಅಗುಳಿಗೆ
ಸೊಕ್ಕು ತೋರದಿರು ರೊಕ್ಕ ಎಷ್ಟಿದ್ದರೇನು ಅದು
ಎಂದಿಗೂ ರೊಟ್ಟಿಯಾಗದು ನೋಡ ಗೂಳಿ ಬಸವ
ರಚನೆ
ಯಗುಮಾಶ
ಶ್ರೀ ಶರಣಬಸ್ಸಪ್ಪ ಎಂ ಗುಳೇದ
No comments:
Post a Comment